Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ದೇಶದಲ್ಲಿ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್’: ಜೆಡಿಎಸ್ ವಾಗ್ದಾಳಿ

ಬೆಂಗಳೂರು: ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಆರ್ ​ಎಸ್​ ಎಸ್​ ವಿರುದ್ಧ ಟೀಕಿಸಿರುವುದನ್ನು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ ಜೆಡಿಎಸ್ ಹೆಚ್​ ಡಿ ಕುಮಾರಸ್ವಾಮಿ
ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಆರ್ ​ಎಸ್​ ಎಸ್ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಅವರು ಈ ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ. ನಿಜ. ಟೀಕೆ ಮಾಡಿರುವುದು ಹೌದು. ಹಾಗೆಯೇ, ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್ ​ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಜೆಡಿಎಸ್ ತಿರುಗೇಟು ನೀಡಿದೆ.