Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಯದೇವಕ್ಕೆ ಪ್ರಭಾರಿ ನಿರ್ದೇಶಕರ ನೇಮಕ.!

 

ಬೆಂಗಳೂರು: ಪ್ರಸಿದ್ಧ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್ ಅವರ ಅವಧಿ ಮುಕ್ತಾಯವಾಗಿದೆ.

ಈ  ಹಿನ್ನೆಲೆಯಲ್ಲಿ, ತೆರವಾದ ಈ ಹುದ್ದೆಗೆ ಕೆ.ಎಸ್.ರವೀಂದ್ರನಾಥ್ ಅವರನ್ನು ಆಸ್ಪತ್ರೆಯ ಪ್ರಭಾರಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರೊಫೆಸರ್ ಕೂಡ ಆಗಿದ್ದಾರೆ.