Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಸ ವಂಟಮೂರಿ ಮಹಿಳೆಯ ವಿಸ್ತ್ರತಿಗೊಳಿಸಿ ಹಲ್ಲೆಗೈದ ಪ್ರಕರಣ – ರೆಜಿಸ್ಟರ್ ಮದುವೆಯಾದ ಪ್ರೇಮಿಗಳು

ಬೆಳಗಾವಿ: ರಾಜ್ಯ ಅಷ್ಟೇ ಅಲ್ಲದೇ ದೇಶದಲ್ಲಿ ಸದ್ದು ಮಾಡಿ ಗಮನ ಸೆಳೆದಿದ್ದ ಬೆಳಗಾವಿ ತಾಲೂಕಿನ ಹೊಸವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಕಂಬಕ್ಕೆ ಕಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಾರಣವಾಗಿದ್ದ ಪ್ರೇಮಿಗಳು ವಿವಾಹವಾಗಿದ್ದಾರೆ.

ಬೆಳಗಾವಿ ದಕ್ಷಿಣ ವಲಯದಲ್ಲಿರುವ ಉಪನೊಂದಣಿ ಕಚೇರಿಯಲ್ಲಿ ಪ್ರೇಮಿಗಳಿಬ್ಬರು ಕಾನೂನು ಪ್ರಕಾರ ಮಂಗಳವಾರ ವಿವಾಹವಾಗಿದ್ದಾರೆ. ವಂಟಮೂರಿ ಗ್ರಾಮದಲ್ಲಿರುವ ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಯುವತಿ ಮನೆಯವರಿಗೆ ತಿಳಿಯುತ್ತಿದಂತೆ ಬೇರೆ ಸಂಬಂಧ ಹುಡಿಕಿದ್ದರು. ಅಲ್ಲದೇ ಡಿಸೆಂಬರ್‌ 11ರಂದು ಯುವತಿಯ ನಿಶ್ಚಿತಾರ್ಥ ಕಾರ್ಯಕ್ರಮವನ್ನು ನಿಗದಿಪಡಿಸಿಕೊಂಡಿದ್ದರು. ಈ ವಿಷಯ ತಿಳಿದು ಪರಸ್ಪರ ಪ್ರೀತಿಸುತ್ತಿದ್ದ ಯುವಕ ಯುವತಿ ರಾತ್ರೋರಾತ್ರಿ ಮನೆ ಬಿಟ್ಟು ಓಡಿ ಹೋಗಿದ್ದರು. ಬಳಿಕ ವಿಷಯ ತಿಳಿದ ಯುವತಿಯ ಮನೆಯವರು ಆಕ್ರೋಶಗೊಂಡ ರಾತ್ರೋರಾತ್ರಿ ಯುವಕ ಮನೆಗೆ ತೆರಳಿ ಮನೆಯನ್ನು ಸಂಪೂರ್ಣವಾಗಿ ಧ್ವಂಸ ಮಾಡಿದ್ದರು. ಜತೆಗೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ, ಅನುಮಾನವೀಯವಾಗಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಇದರಿಂದಾಗಿ ರಾಜ್ಯ ಅಷ್ಟೇ ಅಲ್ಲದೇ ದೇಶಾದ್ಯಂತ ಸದ್ದು ಮಾಡುವುದರ ಜತೆಗೆ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯದ ಮಹಿಳಾ ಆಯೋಗ, ಪೊಲೀಸರು, ಸಿಐಡಿ ಅಧಿಕಾರಿಗಳು ಗಂಭೀರವಾಗಿ ಈ ಪ್ರಕರಣವನ್ನು ಪರಿಗಣಿಸಿ ತನಿಖೆ ಕೈಗೊಂಡಿದ್ದರು. ಈ ಘಟನೆಗೆ ಪ್ರಮುಖ ಕಾರಣರಾಗಿದ್ದ ಪ್ರೇಮಿಗಳನ್ನು ಪೊಲೀಸರು ರಕ್ಷಣೆ ಮಾಡಿ, ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಈಗ ಪರಿಸ್ಥಿತಿ ಶಾಂತವಾದ ಬಳಿಕ ಪ್ರೇಮಿಗಳಿಬ್ಬರು ರೆಜಿಸ್ಟರ್ ಮದುವೆಯಾಗಿದ್ದಾರೆ.