Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚಿಕ್ಕಪ್ಪನಿಂದಲೇ ಬಾಲಕಿಯ ಶಿರಚ್ಛೇದ – ಪ.ಬಂಗಾಳದಲ್ಲಿ ಉದ್ವಿಗ್ನಗೊಂಡ ಪರಿಸ್ಥಿತಿ

ಕೋಲ್ಕತ್ತಾ: 11 ವರ್ಷದ ಬಾಲಕಿಯ ಚಿಕ್ಕಪ್ಪನೊಬ್ಬನ ಆಕೆಯ ಶಿರಚ್ಛೇದ ಮಾಡಿರುವ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

ಈ ಹಿಂದೆ ಹಲವು ಬಾರಿ ಬಾಲಕಿ ತಂದೆ ಸಾರ್ವಜನಿಕವಾಗಿ ಅವಮಾನಿಸಿ ಥಳಿಸಿದ್ದರಿಂದ ನಾನು ಆಕೆಯನ್ನು ಕೊಂದಿರುವುದಾಗಿ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ. ಇನ್ನು ಆರೋಪಿ ಬಾಲಕಿಯ ಶಿರಚ್ಛೇದ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದನೆ ಎಂಬ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ನಗರದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದು, ಅಮಾನುಷವಾಗಿ ಕೊಲೆ ಮಾಡಿರುವ ಬಾಲಕಿಯ ಚಿಕ್ಕಪ್ಪನ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.