Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಗರದ ಬೊಮ್ಮಣ್ಣ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತನುವಿನ ಮಹಾಮನೆಯಲ್ಲಿ ಮಾಡುವ ಮಾಟ,

ಘನಕ್ಕೆ ಘನವೆಂದು ಎದ್ದಿತ್ತು ಉಪ್ಪರಗುಡಿ

ಲೀಲೋಲ್ಲಾಸವೆಂಬ ಕಳೆ ನೆಟ್ಟಿತ್ತು , ಭವವಿರಹಿತನೆಂಬ ಗುಡಿಗಟ್ಟಿತ್ತು ,

ಮಾಡುವ ದಾಸೋಹಕ್ಕೆ ಕೇಡಿಲ್ಲಾ ಎಂದು.

ಕಾಯ ಸವೆದು ಮನಮುಟ್ಟಿ, ಭಾವನಿಶ್ಚಯವಾಗಿ ಮಾಟಕೂಟಸಂದಿತ್ತು ,

ಮಹಾಮನೆ ಮಹವನೊಡಗೂಡಿತ್ತು ,

ಕಾಯದ ಕಣೆ ಹಿಂಗಿತ್ತು, ಭಾವಗೂಡಿ ಅಳಿಯಿತ್ತು

ಸಗರದ ಬೊಮ್ಮನೊಡೆಯತನುಮನ ಸಂಗಮೇಶ್ವರಲಿಂಗವು ತಾನಾದಲ್ಲಿ ,

 

-ಸಗರದ ಬೊಮ್ಮಣ್ಣ