Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತೀರ್ಥಹಳ್ಳಿಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ ದೃಢ: ಆರೋಗ್ಯ ಇಲಾಖೆ

ಶಿವಮೊಗ್ಗ: ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಫೆ 12 ರಂದು ಆರು ಮಂದಿಗೆ ಮಂಗನ ಕಾಯಿಲೆ (ಕೆಎಫ್ಡಿ) ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 42 ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೆಎಫ್ಡಿ ಬಾಧಿತ ಪ್ರದೇಶದಲ್ಲಿ ಜ್ವರದಿಂದ ಬಳಲುತ್ತಿದ್ದ ಆರು ಮಂದಿಯ ರಕ್ತದ ಮಾದರಿಯನ್ನು ಶಿವಮೊಗ್ಗದ ವೈರಲ್ ಡಯಾಗ್ನಸ್ಟಿಕ್ ಲ್ಯಾಬ್ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆಯು, ಕಾಯಿಲೆ ದೃಢಪಟ್ಟವರನ್ನು ಈಗಾಗಲೇ ತೀರ್ಥಹಳ್ಳಿಯ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ 32 ಮಂದಿಗೆ ಕೆಎಫ್ಡಿ ದೃಢಪಟ್ಟಿದ್ದು, ಹೊಸನಗರ ತಾಲ್ಲೂಕಿನ ಅರಮನೆಕೊಪ್ಪ ಭಾಗದ 19 ವರ್ಷದ ಯುವತಿ ಸಾವಿಗೀಡಾಗಿದ್ದಾರೆ.