Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರೈತರ ಗಮನಕ್ಕೆ: RTCಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ..! ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ

ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯಗೊಳಿಸಲಾಗಿದೆ.

ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್  ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ
ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.