Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯಾರ್ಥಿಗಳಿಗೆ BMTC ಕಡೆಯಿಂದ ಸಿಹಿಸುದ್ದಿ: ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು BMTC  ಅವಕಾಶ ಮಾಡಿಕೊಟ್ಟಿದೆ.

ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಬಿಎಂಟಿಸಿ ಬಸ್‌ ನಿರ್ವಾಹಕರಿಗೆ ತೋರಿಸಿ ಬಳಿಕ ಉಚಿತವಾಗಿ ಪರೀಕ್ಷಾ ಕೇಂದ್ರದವರೆಗೆ ಪ್ರಯಾಣಿಸಬಹುದಾಗಿದೆ.