Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಾಜಿ ಸಂಸದೆ, ನಟಿ ಜಯಪ್ರದಾರನ್ನು ಬಂಧಿಸಲು ಕೋರ್ಟ್ ಸೂಚನೆ

ಉತ್ತರಪ್ರದೇಶ: ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರು ತಲೆಮರೆಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಘೋಷಿಸಿದ್ದು, ಅವರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.

2019ರ ಲೋಕಸಭೆ ಚುನಾವಣೆಯ ಸಂದರ್ಭ ಜಯಪ್ರದಾ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಉತ್ತರಪ್ರದೇಶದ ರಾಮಪುರದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ಬಗ್ಗೆ ಜಯಪ್ರದಾ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಜಯಪ್ರದಾ ಅವರು ನ್ಯಾಯಾಲಯ ಸಮನ್ಸ್ ನೀಡಿದ ಹೊರತಾಗಿಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಆದ್ದರಿಂದ ನ್ಯಾಯಾಲಯವು ಜಯಪ್ರದಾ ಅವರನ್ನು ಬಂಧಿಸುವಂತೆ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪ್ರದಾ ಅವರಿಗೆ ನ್ಯಾಯಾಲಯದಿಂದ ಹಲವು ಬಾರಿ ಸಮನ್ಸ್ ಜಾರಿಯಾಗಿದ್ದು, ಇದಕ್ಕೆ ಅವರು ಉತ್ತರ ನೀಡಿರಲಿಲ್ಲ. ಆದ್ದರಿಂದ ಜಯಪ್ರದಾ ಅವರ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದ್ದು, ಮಾ. 6ರಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ರಾಮಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.