Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

26/11ರ ಮುಂಬೈ ದಾಳಿಯ ರೂವಾರಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನ

ಇಸ್ಲಾಮಾಬಾದ್: ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿ ಹಾಗೂ ಲಷ್ಕರ್–ಎ–ತಯಬಾ (ಎಲ್ಇಟಿ) ಕಮಾಂಡರ್ ಅಜಂ ಛೀಮಾ ಪಾಕಿಸ್ತಾನದ ಫೈಸಲಾಬಾದ್ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಮೂಲಗಳಿಂದ ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಅಜಂ ಅಂತ್ಯಕ್ರಿಯೆಯನ್ನು ಫೈಸಲಾಬಾದ್ನ ಮಲ್ಖಾನ್ವಾಲಾದಲ್ಲಿ ನಡೆಸಲಾಗಿದೆ ಎಂದು ವರದಿಯಾಗಿದೆ.

ಹದಿನೈದು ವರ್ಷಗಳ ಹಿಂದೆ ಸಮುದ್ರ ಮಾರ್ಗವಾಗಿ ದಕ್ಷಿಣ ಮುಂಬೈಗೆ ಲಗ್ಗೆ ಇಟ್ಟಿದ್ದ ಪಾಕಿಸ್ತಾನದ 10 ಉಗ್ರರು, ತಾಜ್ ಹೋಟೆಲ್ ಸೇರಿದಂತೆ ಹಲವು ಸ್ಥಳಗಳಲ್ಲಿ ನ. 26 2008 ರಂದು ದಾಳಿ ನಡೆಸಿದ್ದರು. ದಾಳಿಯ ಪರಿಣಾಮ 166 ನಾಗರಿಕರು ಮೃತಪಟ್ಟು, 18 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು.