Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯವನ್ನೇ ಬೆಚ್ಚಿ ಬೀಳಿಸುವ ಕೃತ್ಯ: ಒಂದೇ ಆಸ್ಪತ್ರೆಯಲ್ಲಿ 73 ಭ್ರೂಣ ಹತ್ಯೆ..!

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನೆಲಮಂಗಲದ ಸಮೀಪವಿರುವ ಖಾಸಗಿ ಆಸ್ಪತ್ರೆಯಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆ ಮಾಡಿರುವ ಅಮಾನವೀಯ ಪ್ರಕರಣ ಬಯಲಾಗಿದೆ.

ಡಾ. ರವಿಕುಮಾರ್‌ ಎಂಬವರಿಗೆ ಸೇರಿರುವ ಆಸರೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ಮಾಡಿದಾಗ ಈ ನೀಚ ಕೃತ್ಯ ಗೊತ್ತಾಗಿದೆ.

ಇದು ಕರ್ನಾಟಕದಲ್ಲಿ ನಡೆದಿರುವ ದೊಡ್ಡ ಮಟ್ಟದ ಭ್ರೂಣಹತ್ಯೆ ಪ್ರಕರಣವಾಗಿದ್ದು, ಸರ್ಕಾರ ಇದನ್ನು ಎಷ್ಟೊಂದು ಗಂಭೀರವಾಗಿ ಪರಿಗಣಿಸುತ್ತದೆ ಎಂಬುದನ್ನು ಕಾದು ನೋಡಬೇಕು.