Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಸಭಾ ಚುನಾವಣೆ ನಂತರ ರಾಜ್ಯ ಸರಕಾರ ಪತನ.! ಯತ್ನಾಳ್

 

ವಿಜಯಪುರ : ಮುಂಬರುವ ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ.ಬಿಜೆಪಿ ಮತ್ತೆ ಅಧಿಕಾರ ಹಿಡಿಯಲ್ಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, ನಿಮ್ಮ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳುವುದು ಖಚಿತ ಎಂದು ತಿಳಿಸಿದರು.

ಬಳಿಕ ಮತ್ತೆ ರಾಜ್ಯದಲ್ಲಿ ನಾವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಹಿಂದೂ ವಿರೋಧಿ ಬಗ್ಗೆ ಯಾವುದೇ ಪಠ್ಯಕ್ರಮದಲ್ಲಿ ಸೇರಿಸಿದರೂ ನಾವೆಲ್ಲ ತೆಗೆದು ಹಾಕಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಆದ್ದರಿಂದ ಸಚಿವ ಮಧು ಬಂಗಾರಪ್ಪ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು.