Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸುಳ್ಯ: ಎಎನ್ಎಫ್ ತಂಡ ಆಗಮನ – ಕೂಂಬಿಂಗ್ ಆರಂಭ

ಸುಳ್ಯ : ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಬೀಡು ಬಿಟ್ಟ ಎಂಬ ಮಾಹಿತಿ ಹಿನ್ನೆಲೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಬಿಸಿದ್ದಾರೆ‌. ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಮೂರು ಕಡೆ ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಶನಿವಾರ ಸಂಜೆ ಕೂಜಿಮಲೆಯ ಅಂಗಡಿಯೊಂದರಿಂದ ಎಂಟು ಮಂದಿಯ ತಂಡ ಬಂದು ನಗದು ನೀಡಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು, ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ನಕ್ಸಲರ ತಂಡದಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದರು ಎನ್ನಲಾಗುತಿದ್ದು, ಸಶಸ್ತ್ರಧಾರಿಗಳಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.