Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜೆಡಿಎಸ್‌ಗೆ ರಾಜ್ಯದ ಮೂರು ಕ್ಷೇತ್ರಗಳು ಫಿಕ್ಸ್; ಬಿಜೆಪಿ ಘೋಷಣೆ

ಬೆಂಗಳೂರು: ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಟ್ಟಿರುವುದಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಬಹಿರಂಗ ಘೋಷಿಸಿದ್ದಾರೆ.

ಜೆಡಿಎಸ್ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ರಾಧಾ ಮೋಹನ್ ದಾಸ್ ಕರೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವೆಲ್ಲ ಕ್ಷೇತ್ರಗಳು ದೊರೆಯಲಿವೆ ಎಂಬುದನ್ನು ಬಿಜೆಪಿ ಅಂತಿಮಗೊಳಿಸಿದೆ. ಜೊತೆಗೆ ಬಿಜೆಪಿ ಜೆಡಿಎಸ್ ನಡುವಿನ ಸೀಟು ಹಂಚಿಕೆ ಗುದ್ದಾಟಕ್ಕೆ ತೆರೆಬಿದ್ದಿದೆ.

ಇನ್ನು ಸಂಸದೆ ಸುಮಲತಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಬಿಜೆಪಿ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ಸುಮಲತಾ ಅವರಿಗೆ ಟಿಕೆಟ್ ಕೈತಪ್ಪಿದಂತೆ. ಟಿಕೆಟ್ ಕೈ ತಪ್ಪಿದ ಬಳಿಕ ಸುಮಲತಾ ಅವರು ಪಕ್ಷೇತರವಾಗಿ ಮಂಡ್ಯದಲ್ಲಿ ಕಣಕ್ಕಿಳಿಯುತ್ತಾರೋ ಇಲ್ಲವೋ ಎಂದು ಕಾದುನೋಡಬೇಕಿದೆ.