ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುತ್ತಾರೆ- ಭವಿಷ್ಯ ನುಡಿದ ಜೋಶಿ
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನದಿಂದ ಇಳಿಯೋದು ಖಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ನಲ್ಲಿ ನಾವು ಬಹುಮತ ಸಾಧಿಸಿದ್ದೇವೆ. ಅದರಂತೆ ರಾಜ್ಯದಲ್ಲೂ ಬಿಜೆಪಿ 28 ಕ್ಕೆ 28 ಸ್ಥಾನವನ್ನು ಗೆಲ್ಲುತ್ತದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ. ಜೊತೆಗೆ ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿದ್ದರಾಮಯ್ಯಗೆ ಬೇರೆ ಯಾರಿಂದಲೂ ಸಮಸ್ಯೆಯಿಲ್ಲ. ಅವರ ಪಕ್ಷದವರಿಂದಲೇ ಸಿದ್ದರಾಮಯ್ಯರಿಗೆ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ.
ಇನ್ನು ಈಶ್ವರಪ್ಪ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಅವರು ಕ್ರಮೇಣ ಸಮಾಧಾನವಾಗ್ತಾರೆ. ಚುನಾವಣೆಗೆ ಇನ್ನೂ ಬಹಳ ಸಮಯ ಇರುವುದರಿಂದ ಕೆಲವೆಡೆ ಗೊಂದಲವಿದೆ. ಲೋಕಸಭೆ ಚುನಾವಣೆ ಬೇರೆ, ವಿಧಾನಸಭೆ ಚುನಾವಣೆ ಬೇರೆ. ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೋಡಿ ಮತ ನೀಡುತ್ತಾರೆ ಎಂದರು.