Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ನಿಧನ

ಲಕ್ನೋ: 68ಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದ ಉತ್ತರ ಪ್ರದೇಶದ 5 ಬಾರಿಯ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ (63) ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಅನ್ಸಾರಿಯನ್ನು ಬಾಂಡಾ ಜಿಲ್ಲಾ ಕಾರಾಗೃಹದಿಂದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಊ ಸದರ್ ವಿಧಾನಸಭಾ ಕ್ಷೇತ್ರವನ್ನು ಮುಖ್ತಾರ್ ಐದು ಬಾರಿ ಪ್ರತಿನಿಧಿಸಿದ್ದರು. ಈತನ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದ್ದರಿಂದ 2022ರ ಸೆಪ್ಟೆಂಬರ್‌ನಿಂದ ಬಾಂಡಾ ಜೈಲಿನಲ್ಲಿದ್ದರು. ‘ಮುಖ್ತಾರ್‌ಗೆ ಜೈಲಿನಲ್ಲಿ ವಿಷ ನೀಡಲಾಗಿದೆ’ ಎಂದು ಗಾಜಿಪುರ ಸಂಸದ ಹಾಗೂ ಈತನ ಸಹೋದರ ಅಫ್ಜಲ್ ಅನ್ಸಾರಿ ಈ ಹಿಂದೆ ಆರೋಪಿಸಿದ್ದರು. ‘ಅನ್ಸಾರಿ ನಿಧನದ ನಂತರ ಉತ್ತರ ಪ್ರದೇಶದಾದ್ಯಂತ ಬೃಹತ್ ಸಭೆ ಆಯೋಜಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬಾಂಡಾ, ಮಾಊ, ಗಾಜಿಯಾಪುರ ಮತ್ತು ವಾರಣಾಸಿ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಡಿಜಿಪಿ ಪ್ರಶಾಂತ್‌ ಕುಮಾರ್ ತಿಳಿಸಿದ್ದಾರೆ.