Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ಮಂದಿ ಸಾವು.!

 

ಮುಂಬೈ: ಔರಂಗಬಾದ್ ಜಿಲ್ಲೆಯ ಛತ್ರಪತಿ ಸಂಭಾಜಿ ನಗರದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ.

ಬೆಳಗ್ಗೆ 4 ಗಂಟೆ ಸುಮಾರಿಗೆ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಎಂದು ಸಂಭಾಜಿ ನಗರದ ಪೊಲೀಸ್ ಅಧಿಕಾರಿ ಮನೋಜ್ ಲೋಹಿಯಾ ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಯಲ್ಲಿ ಮೃತರನ್ನು ಹೊರತು ಪಡಿಸಿದರೆ ಬೇರೆ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.