Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಯನಾಡಿನಲ್ಲಿಂದು ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ವಯನಾಡು: ಮುಂಬರುವ ಲೋಕಸಭಾ ಚುನಾವಣೆಗೆ ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಹಾಗೂ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ರಾಹುಲ್ ಗಾಂಧಿ ಅವರು ಈ ಹಿಂದಿನ ಲೋಕಸಭಾ ಚುನಾವಾಣೆಗೆ ವಯನಾಡು ಕ್ಷೇತ್ರದಿಂದಲೇ ಸ್ಪರ್ಧಿಸಿದ್ದರು. ಈ ಬಾರಿಯೂ ಅವರು ಚುನಾವಣೆಗೆ ಮತ್ತೆ ವಯನಾಡು ಕ್ಷೇತ್ರದಿಂದಲೇ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಹಾಗೂ ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಸ್ಪರ್ಧಿಸುತ್ತಿದ್ದಾರೆ.

ಇನ್ನು ನಾಮಪತ್ರ ಸಲ್ಲಿಸುವ ಮುನ್ನ ವಯನಾಡಿನಲ್ಲಿ ಅವರು ರೋಡ್ ಶೋ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಸಿ ಇಂದು ಸಂಜೆ ವೇಳೆಗೆ ದೆಹಲಿಗೆ ಮರಳಲಿದ್ದಾರೆ.