Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅಂದರ್.!

ಶಿವಮೊಗ್ಗ: ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರು ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಎಂದು ತಿಳಿದುಬಂದಿದೆ.ಇವರು ಶರಾವತಿ ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ನಾಡಬಂದೂಕಿನಿಂದ ಜಿಂಕೆ ಬೇಟೆಯಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಜಿಂಕೆ ಚರ್ಮ, ಜಿಂಕೆ ತಲೆ, ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ