Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದಾಖಲೆ ಇಲ್ಲದ 5 ಕೋಟಿ 60 ಲಕ್ಷ ರೂ. ನಗದು ಬಂಗಾರ ಬೆಳ್ಳಿ ವಶ

 

ಬೆಂಗಳೂರು:  ಬಳ್ಳಾರಿಯ  ಬ್ರೂಸ್​ಪೇಟೆ ಠಾಣೆ ಪೊಲೀಸರು ಭಾನುವಾರ ಭರ್ಜರಿ ಬೇಟೆ ಆಡಿದ್ದು, ಚಿನ್ನದ ವ್ಯಾಪಾರಿ ನರೇಶ್​ ಸೋನಿ ಮನೆಯಲ್ಲಿ ದಾಖಲೆ ಇಲ್ಲದೆ ಇಟ್ಟಿದ್ದ 5 ಕೋಟಿ 60 ಲಕ್ಷ ರೂ. ನಗದು, 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣವನ್ನ ವಶಕ್ಕೆ ಪಡೆದಿದ್ದಾರೆ.

ಈ ಸಂಪತ್ತಿನ, ಚಿನ್ನಾಭರಣದ ಮೂಲ ಕೆದಕಿದ ಪೊಲೀಸರಿಗೆ, ಇದೆಲ್ಲ ಪ್ರಭಾವಿ ರಾಜಕಾರಣಿಗೆ ಸೇರಿದ್ದು ಎಂಬ ಅನುಮಾನ ಬಲವಾಗಿದೆ. ಚುನಾವಣೆ ಬಳಕೆಗಾಗಿ ರಾಜಕಾರಣಿಯು ಹಣ ಕೊಟ್ಟಿರುವ ಶಂಕೆ ಎದ್ದಿದೆ. ಮತದಾರರಿಗೆ ಹಂಚಲು, ಹವಾಲಾ ದಂಧೆಯಲ್ಲಿ ಬಳಸಲು ಹಣವನ್ನ ಸಂಗ್ರಹಿಸಿದ್ದ ಸಂಶಯ ಮೂಡಿದ್ದು ತನಿಖೆ ಮುಂದುವರೆಸಿದ್ದಾರೆ