ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ ೨ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ ೩.೪೦ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ.

ಮಾಟ ಮಂತ್ರ ವಾಮಾಚಾರ ಮನೆಗೆ ಮನುಷ್ಯನ ಮೇಲೆ ಆಗಿದಿಯೋ ಇಲ್ಲವೋ ಎಂದು ತಿಳಿದು ಸುಲಭ ತಾಂತ್ರಿಕ ಯಂತ್ರಗಳಿಂದ ಪರಿಹಾರ ತೆಗೆದುಕೊಳ್ಳಿ.

ರಾಷ್ಟ್ರಪತಿ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಅಲ್ಲದೆ , ಸಂಜೆ ೬ ಗಂಟೆವರೆಗೆ ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

Comments (0)
Add Comment