‘ಇಡೀ ದೇಶದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಬಯಸುತ್ತಿದೆ’ – ತೇಜಸ್ವಿ ಯಾದವ್ ಆರೋಪ

ಪಾಟ್ನಾ: ಬಿಜೆಪಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ವ್ಯವಸ್ಥೆಯ ಮೂಲಕ ಇಡೀ ರಾಷ್ಟ್ರದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಬಯಸುತ್ತಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಿಜೆಪಿಯು ಒಂದು ರಾಷ್ಟ್ರ, ಒಂದು ಚುನಾವಣೆಯ ನಂತರ ಈಗ ಒಂದು ರಾಷ್ಟ್ರ, ಒಂದು ಪಕ್ಷ ಎಂದು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮೊದಲು, ಅವರು ‘ಒಂದು ರಾಷ್ಟ್ರ, ಒಂದು ಆದಾಯ ನೀತಿ’ ರಚಿಸಬೇಕು. ಮೊದಲು, ಜನರಿಗೆ ಆರ್ಥಿಕ ನ್ಯಾಯವನ್ನು ಮಾಡಲಿ. ಬಿಜೆಪಿ ಇಡೀ ರಾಷ್ಟ್ರದ ಮೇಲೆ ಹಿಡಿತ ಸಾಧಿಸಲು ಬಯಸಿದೆ ಎಂದು ಆರೋಪಿಸಿದ್ದಾರೆ.

Comments (0)
Add Comment