ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡ ಡಿಐಜಿ

ಕೊಯಮತ್ತೂರು: ಇಲ್ಲಿನ ಡಿಐಜಿ ವಿಜಯಕುಮಾರ್ ಐಪಿಎಸ್ ಅವರು ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿಕ್ಷೆ ತಡೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6 ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ ಹುದ್ದೆಯಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ , ಕಡಲೂರು , ನಾಗಪಟ್ಟಿಣಂ ಮತ್ತು ತಿರುವರೂರ್‌ನಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments (0)
Add Comment