‘ಕಾಂಗ್ರೆಸ್‌ ಪಕ್ಷ ತುಕ್ಕುಹಿಡಿದ ಕಬ್ಬಿಣವಾಗಿದೆ’ – ಮೋದಿ

ಭೋಪಾಲ್‌:ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕುಹಿಡಿದ ಕಬ್ಬಿಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಂಬೋರಿ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಟುಂಬ ರಾಜಕಾರಣದ ವಿರುದ್ಧ ಕಿಡಿಕಾರಿದ ಅವರು ಕಾಂಗ್ರೆಸ್‌ ಕೇವಲ ತನ್ನ ಕುಟುಂಬದ ಏಳಿಗೆಗಾಗಿ ಮಾತ್ರ ಯೋಚಿಸುತ್ತಿದೆ, ವಿನಃ ದೇಶದ ಜನರ ಅಭಿವೃದ್ಧಿ ಬಗ್ಗೆ ಅಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ನೇತೃತ್ವದ ಘಮಂಡಿಯಾ ಘಟಬಂಧನ್‌ ಮಹಿಳಾ ಮೀಸಲು ಮಸೂದೆಗೆ ಅರ್ಧ ಮನಸ್ಸಿನಿಂದ ಮತ ಚಲಾಯಿಸಿರುವುದಾಗಿ ಪ್ರಧಾನಿ ಮೋದಿ ಆರೋಪಿಸಿದರು.

ವಿಪಕ್ಷಗಳ ಬಗ್ಗೆ ಮಹಿಳೆಯರು ಎಚ್ಚರದಿಂದ ಇರಬೇಕು, ಅವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯಲು ಹೊರಟಿದ್ದಾರೆ ಎಂದು ಮೋದಿ ಟೀಕಿಸಿದರು.

Comments (0)
Add Comment