ಕುಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿಕೆ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂಬ ಪುತ್ರ ಯತೀಂದ್ರ ಹೇಳಿಕೆ ವೈರಲ್ ಆಗುತ್ತಿದ್ದಂತೆಯೇ ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ನಡೆದ ಜಿಲ್ಲಾ ಸಮಾವೇಶದ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಪದಾಧಿಕಾರಿಗಳು ಉಡುಗೊರೆಗಳನ್ನು ವಿತರಿಸಿದ್ದಾರೆ. ಪಕ್ಷದಿಂದ ಅಥವಾ ನಮ್ಮ ಕಡೆಯಿಂದ ನೀಡಿಲ್ಲ, ಈ ವೇಳೆ ನಮ್ಮ ತಂದೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ನನಗೆ ಸಾಧ್ಯವಾಗದ ಕಾರಣ ನನ್ನ ತಂದೆ ಸಮಾವೇಶಕ್ಕೆ ಹಾಜರಿದ್ದರು ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ..

Comments (0)
Add Comment