ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ

ಕೆನಡಾ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಕೆನಡಾ ಮತ್ತು ಭಾರತದ ಸಂಬಂಧ ಹದಗೆಟ್ಟಿದ್ದು, ಇದರ ಬೆನ್ನಲ್ಲಿಯೇ ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆಯಾಗಿದೆ.

ಇಂದು ಬೆಳಗ್ಗೆ ನಡೆದ ಗ್ಯಾಂಗ್‌ ವಾರ್‌ನಲ್ಲಿ ಕೆನಡಾದಲ್ಲಿನ ಖಲಿಸ್ತಾನಿ ಉಗ್ರ ಸುಖ್ದೋಲ್‌ ಸಿಂಗ್‌ ಅಲಿಯಾಸ್‌ ಸುಖ ದುನೆಖೆ ಹತ್ಯೆಗೀಡಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇನ್ನು ಹತ್ಯೆಗೀಡಾದ ಸುಖ ದುನೆಖೆ ಕೆನಡಾದಲ್ಲಿ ನಡೆಯುತ್ತಿದ್ದ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ ಎಂದು ತಿಳಿದುಬಂದಿದೆ.

ಈತ ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾ ಜೊತೆ ನಿಕಟ ಸಂಬಂಧ ಹೊಂದಿದ್ದ ಎನ್ನಲಾಗಿದೆ.

Comments (0)
Add Comment