ಚಿಕ್ಕಮಗಳೂರು ಹಿಟ್​ ಆ್ಯಂಡ್​ ರನ್​ ಪ್ರಕರಣ- ​ತಪ್ಪಾಯ್ತು ಎಂದು ಕ್ಷಮೆ ಕೇಳಿದ ಗಿಚ್ಚಗಿಲಿಗಿಲಿ ನಟ ಚಂದ್ರಪ್ರಭ

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಹಿಟ್ ಅ್ಯಂಡ್ ರನ್ ಪ್ರಕರಣದಲ್ಲಿ ಇದೀಗ ಕಾರಿನಲ್ಲಿದ್ದ ಗಿಚ್ಚಗಿಲಿಗಿಲಿ ನಟ ಚಂದ್ರಪ್ರಭ ತಪ್ಪಾಯ್ತು ಎಂದು ಪೊಲೀಸ್ ಠಾಣೆಯಲ್ಲಿ ಕ್ಷಮೇ ಕೇಳಿದ್ದಾರೆ.

ಬೈಕ್​ ಸವಾರ ಕುಡಿದಿದ್ದ ಎಂದು ಹೇಳಿದ್ದೆ. ನನ್ನನ್ನು ಕ್ಷಮಿಸಿ. ಆತ ಕುಡಿದಿರಲಿಲ್ಲ. ನಾನು ಮಾಡಿದ್ದು ತಪ್ಪಾಯ್ತು. ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ. ನನಗೆ ಭಯವಾಯಿತು’ ಎಂದು ಚಂದ್ರಪ್ರಭ ಹೇಳಿದ್ದಾರೆ.

ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಚಂದ್ರಪ್ರಭ ಅವರು ಕಣ್ಣೀರು ಹಾಕಿದ್ದಾರೆ. ಸೋಮವಾರ ಸೆಪ್ಟೆಂಬರ್​ 4 ಅವರು ಅಪಘಾತ ಮಾಡಿ ಎಸ್ಕೇಪ್​ ಆಗಿದ್ದರು. ಪೊಲೀಸರ ಸೂಚನೆ ಮೇರೆಗೆ ಇಂದು ಸೆಪ್ಟೆಂಬರ್​ 8 ಚಿಕ್ಕಮಗಳೂರು ಠಾಣೆಗೆ ಅವರು ಹಾಜರಾಗಿದ್ದಾರೆ. ಈ ವೇಳೆ ಅವರು ತಪ್ಪು ಒಪ್ಪಿಕೊಂಡು ಕಣ್ಣೀರು ಹಾಕಿದ್ದೂ ಅಲ್ಲದೇ, ಅಪಘಾತಕ್ಕೆ ಒಳಗಾದ ಯುವಕನ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ.

Comments (0)
Add Comment