ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ – ಹೆದ್ದಾರಿ ತಡೆದು ಪ್ರತಿಭಟನೆ, ಹಲವರ ಬಂಧನ

ರಾಮನಗರ: ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ.

ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಈ ವೇಳೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಳಿಕ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಯಿತು.

ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು. ಪ್ರತಿಭಟನಾಕಾರರು ಹೈವೆಯಲ್ಲಿ ಕೈಯಲ್ಲಿ ಖಾಲಿ ಬಿಂದಿಗೆ ಹೀಡುಕೊಂಡು ಉರುಳು ಸೇವೆ ಮಾಡುವ ಮೂಲಕ ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸಿದ್ದು, ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Comments (0)
Add Comment