ಬಂಟ್ವಾಳ: ಕಾರು ಪಲ್ಟಿ- ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಧರೆಗೆ ಗುದ್ದಿ ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. 

ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ರವರ ಪುತ್ರಿ ಖತೀಜಹನ (20 ವ.) ಮೃತಪಟ್ಟ ವಿದ್ಯಾರ್ಥಿನಿ. ಕಾರಿನಲ್ಲಿದ್ದ ಖತೀಜಹನರ ತಾಯಿ ಸಮೀಮ ಮತ್ತು ಚಾಲಕ ಶಾನ್ ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಮಂಗಳೂರು: ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ತಕ್ಷಣ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆಯಲ್ಲಿ ವೈದ್ಯರನ್ನು ಬೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ. ಗಂಭೀರ ಗಾಯಗೊಂಡ ಖತೀಜಹನ ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Comments (0)
Add Comment