ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ – ಓರ್ವ ಭಯೋತ್ಪಾದಕನ ಹತ್ಯೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದು, ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್‌ಕೌಂಟರ್ ಪ್ರಾರಂಭವಾಗಿ, ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳ ತಂಡ ಹತ್ಯೆಗೈದಿದ್ದು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇನ್ನು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಶನಿವಾರ 4 ನೇ ದಿನಕ್ಕೆ ಮುಂದುವರೆದಿದ್ದು ಈ ವೇಳೆ ದೊಡ್ಡ ದೊಡ್ಡ ಸ್ಫೋಟದ ಸದ್ದುಗಳು ಕೇಳಿಬಂದಿವೆ.

Comments (0)
Add Comment