ಬಿಜೆಪಿ- ಜೆಡಿಎಸ್‌ ಮೈತ್ರಿ: ಸೀಟು ಹೊಂದಾಣಿಕೆ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ- ಹೆಚ್‌ಡಿಕೆ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮುಂದಿನ ದಿನಗಳಲ್ಲಿ ದೀರ್ಘಾವಧಿ ಸಂಬಂಧ ಮುಂದುವರಿಸುವ ನಿಟ್ಟಿನಲ್ಲಿ ಮಾತುಕತೆ ಕೇಂದ್ರೀಕೃತವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ದೆಹಲಿಯಿಂದ ವಾಪಸ್ಸಾದ ಬಳಿಕ ನಗರದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಜೊತೆ ಮೈತ್ರಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರೊಂದಿಗೆ ಸೌಹಾರ್ದಯುತ ಮತ್ತು ಗೌರವಯುತವಾಗಿ ಚರ್ಚೆ ನಡೆದಿವೆ ಎಂದು ಹೇಳಿದರು.

ಸೀಟು ಹೊಂದಾಣಿಕೆ ವಿಷಯದಲ್ಲಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಅವರು ಮೈತ್ರಿ ಹೊರತಾಗಿ ರಾಜ್ಯದ ಹಲವಾರು ಸಮಸ್ಯೆಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚಿಸಲಾಗಿದೆ, ಆ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗದು ಎಂದರು.

ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವುದು ತಮ್ಮ ಆದ್ಯತೆಯಾಗಿದೆ ಎಂದು ಹೇಳಿದರು.

Comments (0)
Add Comment