ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

ಬೆಳ್ತಂಗಡಿ : ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ, ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದೆ. ಘಟನ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದಾರೆ.2

ಪ್ರಥಮ ಬಾರಿಗೆ ತೃತೀಯ ಲಿಂಗಿ ಮುಡಿಗೆ ಮಿಸ್ ನೆದರ್ಲ್ಯಾಂಡ್ಸ್ ಕಿರೀಟ

ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಈ ಕೊರಗಜ್ಜನ ದೇವಾಸ್ಥಾನವಿದ್ದು, ನೇಮೋತ್ಸನ ನಡೆಯುತ್ತಿತ್ತು ಎನ್ನಲಾಗಿದ್ದು, ದೇವಾಲಯದ ಜಾಗಕ್ಕೆ ಸಂಬಂಧಪಟ್ಟಂತೆ ಆಗಾಗ್ಗಾ ಜಗಳ ನಡೆಯುತ್ತಿತ್ತು, ಎನ್ನಲಾಗಿದೆ. ಈ ನಡುವೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿ ಅಟ್ಟಹಾಸ ಮರೆದಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Comments (0)
Add Comment