‘ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಯಮ ಕಾಯುತ್ತಿದ್ದಾನೆ’- ಯೋಗಿ ಎಚ್ಚರಿಕೆ

ಲಕ್ನೋ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಯಮರಾಜ ಕಾಯುತ್ತಿದ್ದಾನೆ ಎಂದು ಕಿಡೆಗೇಡಿಗಳಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿಚಾರವಾಗಿ ಯೋಗಿ ಗುಡುಗಿದ್ದಾರೆ. ಇತ್ತೀಚೆಗೆ ಅಂಬೇಡ್ಕರ್ ನಗರದಲ್ಲಿ ಮೂವರು ಕಿಡಿಗೇಡಿಗಳು ಸೈಕ್‍ಲ್‍ನಲ್ಲಿ ತೆರಳುತ್ತಿದ್ದ ಬಾಲಕಿಯರ ದುಪ್ಪಟ್ಟಾ ಎಳೆದು ಕೆಡವಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಇದನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ.

ಈ ವೇಳೆ ಮಹಿಳೆಯರಿಗೆ ತೊಂದರೆ ಕೊಡುವವರಿಗೆ ಯಮ ಅಂತವರಿಗೆ ಕಾದು ಕುಳಿತಿದ್ದಾನೆ ಎಂದು ಎಚ್ಚರಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನಿನ ಅಗತ್ಯವಿದೆ. ಮಹಿಳೆಯರಿಗೆ ತೊಂದರೆ ಕೊಡುವ ಯಾರೇ ಆದರೂ ಅಂತವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Comments (0)
Add Comment