ಮುಂಗಾರು ಅಧಿವೇಶನದಿಂದ AAP ಸಂಸದ ಸಂಜಯ್ ಸಿಂಗ್ ಅಮಾನತು

ನವದೆಹಲಿ: ಮುಂಗಾರು ಅಧಿವೇಶನದ ಉಳಿದ ಅವಧಿಯವರೆಗೂ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಸದನದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ನಡೆಯಿತು. ರಾಜ್ಯಸಭೆ ಅಧ್ಯಕ್ಷರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಬಗ್ಗೆ ಬಿಜೆಪಿ ಮತ್ತು ಎಎಪಿ ಪಕ್ಷಗಳ ನಡುವಿನ ಸಂಘರ್ಷದ ಈ ಹೊತ್ತಿನಲ್ಲಿ ಅಮಾನತು ಮಾಡಲಾಗಿದೆ.

Comments (0)
Add Comment