ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ

ಮುಂಬೈ: ಇಲ್ಲಿನ ಕಾರೊಂದು ಮೇಲ್ಸೇತುವೆ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರಣ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದಿದ್ದು, ಬೆಳಕಿಗೆ ಬಂದಿದೆ.

ಬೆಳಿಗ್ಗೆ ೭:೩೦ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿದ್ದು, ಈ ಸಮಯ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊAಡಿದೆ. ಅತಿ ವೇಗದಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರಿಂದ ತಿಳಿದಿದೆ.

290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂದು ತನಿಖೆ ಬಳಿಕ ತಿಳಿಯಲಿದ್ದು, ಸದ್ಯ ಗಾಯಾಳುಗಳು ಚೇತರಿಸಿಕೊಂಡ ಬಳಿಕ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ಸೂಚಿಸಿದ್ದಾರೆ.

Comments (0)
Add Comment