‘ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ’- ಖಂಡ್ರೆ

ಚಿಕ್ಕಮಗಳೂರು: ಜೆಡಿಎಸ್‌-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ, ಬಿಜೆಪಿ-ಜೆಡಿಎಸ್ ಪಕ್ಷಗಳ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ಳುತ್ತಿದ್ದಾರೆ. ಅವರಿಗೆ ನಮ್ಮ ಅಸ್ತಿತ್ವವೇ ಹೋಗುತ್ತದೆ , ಕಾಂಗ್ರೆಸ್ ಮುಂದೆ ನಾವು ಏನೂ ಇರಲ್ಲ ಅನ್ನಿಸಿದೆ. ಯಾವುದೇ ಕೆಲಸ ಇಲ್ಲದ ಕಾರಣ ಹೊಟ್ಟೆಕಿಚ್ಚಿನಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ ಎಂದರು.
ನಾವು ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದರು.ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ ಎಂದರು.

ಕಾವೇರಿ ನದಿ ನೀರು ವಿವಾದದ ಕುರಿತು ಪ್ರತಿಕ್ರಿಯಿಸಿ, ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ. ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು, ನಮ್ಮ ರೈತರ ಅನೂಕುಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ ಎಂದು ನುಡಿದರು.

Comments (0)
Add Comment