ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಸುತ್ತೋಲೆ.!

 

ಬೆಂಗಳೂರು: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅಥವಾ ನಿಯೋಜಿಸಲು ಸಿಎಂ ಅನುಮತಿ ಕಡ್ಡಾಯವೆಂದು ಸಿಬ್ಬಂದಿ ಹಾಗೂ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ.

ಸಿಎಂ ಅನುಮತಿ ಪಡೆದೇ ವರ್ಗಾವಣೆಗೊಳಿಸಬೇಕು. ಇಲ್ಲವಾದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತದೆ. ವರ್ಗಾವಣೆ ಮಾಡಿದ ನಂತರ ಸಿಎಂ ಅನುಮತಿ ಪಡೆಯಲೂ ಅವಕಾಶವಿಲ್ಲವೆಂದು ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

 

Comments (0)
Add Comment