ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ – 3 ಮಂದಿ ಮೃತ್ಯು

ವಿಶಾಖಪಟ್ಟಣಂ: ಎಕ್ಸ್‌ಪ್ರೆಸ್‌ ರೈಲೊಂದು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂನಿಂದ ರಾಯಗಡಕ್ಕೆ ಹೋಗುತ್ತಿದ್ದು, ಓವರ್ಹೆಡ್ ಕೇಬಲ್ ಮುರಿದು ಬಿದ್ದ ಕಾರಣ ಅದು ನಿಂತುಹೋಯಿತು. ವೇಗದಿಂದ ಬರುತ್ತಿದ್ದ ಪಲಾಸ ಎಕ್ಸ್‌ಪ್ರೆಸ್‌ ರೈಲು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಬೋಗಿಗಳು ಹಳಿತಪ್ಪಿತು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದು, ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.

Comments (0)
Add Comment