ಇಂದು ನಟ ದರ್ಶನ್ ವಿಚಾರಣೆ – ಠಾಣೆ ಮುಂದೆ ಪೊಲೀಸ್ ಭದ್ರತೆ

ಬೆಂಗಳೂರು: ಪಬ್ ನಲ್ಲಿ ತಡರಾತ್ರಿವರೆಗೂ ಪಾರ್ಟಿ ಮಾಡಿದ್ದಾರೆ ಎನ್ನುವ ಆರೋಪ ಹೊತ್ತಿರುವ ನಟ ದರ್ಶನ್ ಮತ್ತು ಸ್ಯಾಂಡಲ್ ವುಡ್ ಕೆಲ ನಟರು ಇಂದು ಪೊಲೀಸ್ ವಿಚಾರಣೆಗಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಆಗಮಿಸಲಿದ್ದಾರೆ.

ದರ್ಶನ್ ಮತ್ತು ಇತರ ನಟರು ಪಬ್ ವೊಂದರಲ್ಲಿ ತಡರಾತ್ರಿವರೆಗೂ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ನೀಡಿದ್ದರು.

ಇನ್ನು ದುಬೈ ಪ್ರವಾಸದ ನಿಮಿತ್ತ ವಿಚಾರಣೆಗೆ ದರ್ಶನ್ ಹಾಜರಾಗಿರಲಿಲ್ಲ. ಪಾರ್ಟಿಯಲ್ಲಿ ಭಾಗವಹಿಸಿದ ಚಿತ್ರತಂಡ ಹಾಗೂ ಇತರ ನಟರು ವಿಚಾರಣೆಗಾಗಿ ಇಂದು ಸ್ಟೇಶನ್ ಗೆ ಆಗಮಿಸುತ್ತಿದ್ದು ಠಾಣೆ ಮುಂದೆ ಪೊಲೀಸ್ ಭದ್ರತೆ ನೀಡಲಾಗಿದೆ.

Comments (0)
Add Comment