ಇಂದು ಮೋದಿ ಸರ್ಕಾರದ ಸಚಿವ ಸಂಪುಟದ ಕೊನೆ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಇದು ಮೋದಿಯವರ 2ನೇಯ ಅವಧಿಯಲ್ಲಿ ನಡೆಯುತ್ತಿರುವ ಕೊನೆಯ ಸಭೆಯಾಗಿದೆ.

ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೂ ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೊಸದಿಲ್ಲಿಯ ಚಾಣಕ್ಯಪುರಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಈ ಸಚಿವ ಸಂಪುಟ ಸಭೆ ನಡೆಯಲಿದೆ.ಈ ಸಭೆಯಲ್ಲಿ 2047ರ ಹೊತ್ತಿಗೆ ಅಭಿವೃದ್ಧಿ ಭಾರತಕ್ಕಾಗಿ ಸಿದ್ಧಪಡಿಸಲಾಗುತ್ತಿರುವ ನೀಲ ನಕ್ಷೆಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.  ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರದರ್ಶನ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ, ಮೂರನೇ ಬಾರಿಗೆ ಎನ್‌ಡಿಎ ಸರಕಾರ ಮತ್ತೆ ಅಧಿಕಾರಕ್ಕೇರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗುತ್ತದೆ.

ಮುಂದಿನ ಒಂದೆರಡು ವಾರ ಗಳಲ್ಲಿ ಕೇಂದ್ರ ಚುನಾವಣ ಆಯೋಗವು ಲೋಕಸಭೆ ಚುನಾವಣ ವೇಳಾ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ

Comments (0)
Add Comment