ಈ ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.!

 

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಮುಷ್ಟಲಗುಮ್ಮಿ ಹಾಗೂ ಗುಂತಕೋಲಮ್ಮನಹಳ್ಳಿ ಗ್ರಾಮಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಮುಷ್ಟಲಗುಮ್ಮಿ ಗ್ರಾಮದಲ್ಲಿ 88 ಎಎವೈ, 397 ಪಿಹೆಚ್‍ಹೆಚ್, 66 ಎನ್‍ಪಿಹೆಚ್ ಸೇರಿದಂತೆ ಒಟ್ಟು 551  ಪಡಿತರ ಚೀಟಿಗಳಿವೆ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ಮೂಲ ನ್ಯಾಯಬೆಲೆ ಅಂಗಡಿಯ ಪಡಿತರ ಚೀಟಿಗಳನ್ನು ಹೊರತುಪಡಿಸಿ, ಹೊಸ ನ್ಯಾಯಬೆಲೆ ಅಂಗಡಿಗೆ ನಿಯೋಜಿಸಲು 09 ಎಎವೈ, 250 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 259  ಪಡಿತರ ಚೀಟಿಗಳಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ನಿಗಧಿತ ಅರ್ಜಿ “ಎ” ಅನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

ಈ ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.!
Comments (0)
Add Comment