ಎಸ್.ಎಸ್.ಎಲ್.ಸಿ ಪರೀಕ್ಷೆ ನಕಲು : ಈ ನಾಲ್ವರು ಶಿಕ್ಷಕರ ಅಮಾನತು

 

ಚಿತ್ರದುರ್ಗ:ಶನಿವಾರ ನಡೆದ ಎಸ್.ಎಸ್.ಎಲ್.ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯದೇ, ನಕಲಿಗೆ ಸಹಕರಿಸಿದ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಳ್ಳಕೆರೆ ತಾಲ್ಲೂಕು ಪರುಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್, ಪ್ರಕಾಶ್, ರಾಘವೇಂದ್ರ, ರೇವಣ್ಣ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ನಕಲು : ಈ ನಾಲ್ವರು ಶಿಕ್ಷಕರ ಅಮಾನತು
Comments (0)
Add Comment