ಒಬ್ಬ ಯೋಧ ಯಾವುದನ್ನೂ ದೂರಲು, ವಿಷಾದಿಸಲು ಸಾಧ್ಯವಿಲ್ಲ-ಶಾಸಕ ಯತ್ನಾಳ್

ಬೆಂಗಳೂರು: ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಆ ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಕೇವಲ ಸವಾಲುಗಳಾಗಿರುತ್ತವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನ ನೇಮಕ ವಿಚಾರವಾಗಿ ಶಾಸಕ ಯತ್ನಾಳ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕಾಂಗ ಸಭೆಯಿಂದ ಹೊರ ನಡೆದ ಬೆನ್ನಲ್ಲೇ ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ‘ನ ದೈನ್ಯಂ, ನ ಪಲಾಯನಂ’ ಎಂದಿದ್ದಾರೆ. ಇನ್ನು ಇಂದು ಹೋಟೆಲ್​ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಗೂ ಮುನ್ನವೇ ”ಇದು ಬಡವರು ಚಹಾ ಕುಡಿಯುವ ಜಾಗವಲ್ಲ. ಇಲ್ಲಿ ಚಹಾ ಬಹಳ ತುಟ್ಟಿ. ಚಹಾ ಕುಡಿಯಲು ಹೊರಗಡೆ ಹೋಗುತ್ತಿದ್ದೇನೆ” ಎಂದು ಶಾಸಕ ಯತ್ನಾಳ್ ಹೊರ ನಡೆದಿದ್ದರು.

Comments (0)
Add Comment