‘ಕರಾವಳಿ ಭಾಗದ ಎಲ್ಲಾ 3 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲ್ಲುತ್ತದೆ’- ಯತ್ನಾಳ್

ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಭಾಗದ ಎಲ್ಲಾ 3 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲ್ಲುತ್ತದೆ ಎಂದು ಬಿಜೆಪಿ ಸ್ಟಾರ್ ಪ್ರಚಾರಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಜನರಿಗೆ ನರೇಂದ್ರ ಮೋದಿಯವರೆ ಮತ್ತೇ ಪ್ರಧಾನಿಯಾಗಬೇಕೆಂಬ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷ ಭಾರತಕ್ಕೆ ಅನಿವಾರ್ಯ ಅನ್ನೋದು ಇಂದು ಸಾಮನ್ಯ ಮತದಾರನಿಗೂ ಅರಿವಾಗಿದೆ ಎಂದರು.

ಬಿಜೆಪಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ. ಕೆಲ ಕ್ಷೇತ್ರಗಳ ಕಾರ್ಯಕರ್ತರಲ್ಲಿ ಅಸಮಾಧಾನವಿದೆ. ಆದರೆ ಅವರೆಲ್ಲರೂ ಭಾರತ, ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

 

 

Comments (0)
Add Comment