ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ

ಜೈಪುರ:ರಾಷ್ಟ್ರೀ ಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾದ ಘಟನೆ ಮಂಗಳವಾರ ಜೈಪುರದಲ್ಲಿ ನಡೆದಿದೆ.

ಗೊಗಮೆಡಿ ಅವರು ಮಧ್ಯಾಹ್ನ 1.45 ರ ಸುಮಾರಿಗೆ ತನ್ನ ಮನೆಯಲ್ಲಿದ್ದ ವೇಳೆ ಮನೆಯೊಳಗೆ ಬಂದ ಇಬ್ಬರು ಅಪರಿಚಿತರು ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇಬ್ಬರು ವ್ಯಕ್ತಿಗಳು ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ನೋಡಬಹುದು.

ಗಂಭೀರ ಗಾಯಗೊಂಡಿದ್ದ ಸುಖದೇವ್‌ವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋ ತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿ ನಡೆದ ಸಂದರ್ಭದಲ್ಲಿ ಸುಖದೇವ್‌ ಜೊತೆಗಿದ್ದ ಗನ್ ಮ್ಯಾನ್ ಅಜಿತ್ ಸಿಂಗ್ ಅವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments (0)
Add Comment