ಕಲುಷಿತ ನೀರು ಸೇವಿಸಿ 18 ಜನ ಅಸ್ವಸ್ಥ- ಆಸ್ಪತ್ರೆಗೆ ದಾಖಲು

ಕಲುಷಿತ ನೀರು ಸೇವಿಸಿ 18 ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಇಂದು ಗ್ರಾಮದಲ್ಲಿ ಬಿಡಲಾಗಿರುವ ಕಲುಷಿತ ನೀರು ಕುಡಿದ 18 ಜನರು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮ ಪಂಚಾಯಿತಿಯವರು ಓವರ್‌ ಹೆಡ್‌ ಟ್ಯಾಂಕ್‌ ಸ್ವಚ್ಛ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Comments (0)
Add Comment