ಕಾಡುಗಳ್ಳ ವೀರಪ್ಪನ್‌ ಪುತ್ರಿ ವಿದ್ಯಾ ರಾಣಿ ಎನ್‌ಟಿಕೆ ಪಕ್ಚದಿಂದ ಕಣಕ್ಕೆ.!

 

ಚೆನ್ನೈ: ‘ನಾಮ್‌ ತಮಿಳರ್‌ ಕಚ್ಚಿ’ (ಎನ್‌ಟಿಕೆ) ಪಕ್ಷದ ಅಭ್ಯರ್ಥಿಯಾಗಿ ಕಾಡುಗಳ್ಳ ವೀರಪ್ಪನ್‌ ಪುತ್ರಿ ವಿದ್ಯಾ ರಾಣಿ ಅವರು ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

2020ರ ಜುಲೈನಲ್ಲಿ ಬಿಜೆಪಿ ಸೇರಿದ್ದ ವಿದ್ಯಾ ರಾಣಿ, ರಾಜ್ಯ ಯುವ ಘಟಕದ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದರು. ಆದರೆ, ಇತ್ತೀಚೆಗೆ ಆ ಪಕ್ಷವನ್ನು ತೊರೆದು ಎನ್‌ಟಿಕೆಗೆ ಸೇರಿದ್ದಾರೆ. ವಕೀಲೆಯಾಗಿರುವ ಅವರು, ಕೃಷ್ಣಗಿರಿಯಲ್ಲಿ ಶಾಲೆ ನಡೆಸುತ್ತಿದ್ದಾರೆ.

ತಮಿಳುನಾಡು ಹಾಗೂ ಪುದುಚೇರಿಯ ಒಟ್ಟು 40 ಕ್ಷೇತ್ರಗಳಲ್ಲಿ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಪ್ರಕಟಿಸಿರುವ ಸೀಮನ್‌, ‘ವಿದ್ಯಾ ರಾಣಿ ಕೃಷ್ಣಗಿರಿಯಿಂದ ಸ್ಪರ್ಧಿಸಲಿದ್ದಾರೆ’ ಎಂದು ಘೋಷಿಸಿದ್ದಾರೆ.

ಕಾಡುಗಳ್ಳ ವೀರಪ್ಪನ್‌ ಪುತ್ರಿ ವಿದ್ಯಾ ರಾಣಿ ಎನ್‌ಟಿಕೆ ಪಕ್ಚದಿಂದ ಕಣಕ್ಕೆ.!
Comments (0)
Add Comment