ಕೆಫೆ ಬಾಂಬ್ ಪ್ರಕರಣ: ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡ ದೃಢ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು ವಿಚಾರಣೆ ವೇಳೆ ದೃಢಪಟ್ಟಿದೆ.

ಮಾ.​ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಬಾಂಬಗ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಎನ್​ಐಎ ಅಧಿಕಾರಿಗಳು ಮಾ. 4ರ ರಾತ್ರಿ ಪರಪ್ಪನ ಅಗ್ರಹಾರ ಸೇರಿದಂತೆ ದೇಶದ 18 ಜೈಲುಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರೀಶಿಲನೆ ನಡೆಸಿದ್ದರು. ಈ ವೇಳೆ ಪರಪ್ಪನ ಅಗ್ರಹಾರದಲ್ಲಿದ್ದ ಶಂಕಿತ ಉಗ್ರ ಮಾಜ್​ ಮುನೀರ್​ನನ್ನು ಕೂಡ ವಶಕ್ಕೆ ಪಡೆಯಲಾಗಿತ್ತು. ಶಂಕಿತ ಉಗ್ರನನ್ನು ಸತತ 8 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿತ್ತು. ಇದೀಗ ವಿಚಾರಣೆ ವೇಳೆ ಶಂಕಿತ ಉಗ್ರ ಸತ್ಯ ಬಾಯಿ ಬಿಟ್ಟಿರುವುದಾಗಿ ತಿಳಿದುಬಂದಿದೆ.

ಶಂಕಿತ ಉಗ್ರ ಮಾಜ್ ಮುನೀರ್ ಇದ್ದ ಜೈಲು ಕೋಣೆಯನ್ನು ಎನ್​ಐಎ ಅಧಿಕಾರಿಗಳು ತಪಾಸಣೆ ನಡೆಸಿದಾಗ ನೋಟ್ ಬುಕ್ ಒಂದು ಪತ್ತೆಯಾಗಿದ್ದು, ಅದರಲ್ಲಿ ಕೆಲ ಕೋಡ್ ವರ್ಡ್ ಗಳನ್ನು ಬರೆಯಲಾಗಿತ್ತು. ಇವುಗಳನ್ನು ಎನ್​ಐಎ ಅಧಿಕಾರಿಗಳು ಡಿಕೋಡ್ ಮಾಡಿದ್ದು, ಕೆಫೆ ಸ್ಫೋಟ ಸಂಬಂಧ ಲಿಂಕ್ ಲಭ್ಯವಾಗಿತ್ತು. ಶಂಕಿತ ಉಗ್ರ ಜೈಲಿನಲ್ಲಿ ಇದ್ದುಕೊಂಡೇ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎಂಬುದು ಈ ಮೂಲಕ ಪತ್ತೆಯಾಗಿತ್ತು.

Comments (0)
Add Comment