–ಚಂದಿಮರಸ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಇಂದ್ರಿಯಂಗಳೊಡಗೂಡಿ ಬಹಿರ್ಮುಖನಾಗಿ

ವಿಷಯಂಗಳಲ್ಲಿ ಆಸಕ್ತಿಯುಳ್ಳವನು ಅಂತರ್ಮುಖ ರೂಪನಪ್ಪ,

ಪ್ರತ್ಯಗಾತ್ಮನನೆಂತೂ ಕಾಣಲರಿಯೆನು.

ಮೇರುಗಿರಿಯ ಕಂಡೆಹೆನೆಂದು ತೆಂಕಮುಖನಾಗಿ ನಡೆದು

ಮೇರುಗಿರಿಯ ಕಾಣಲರಿಯನೆಂತಂತೆ,

ಸಕಲ ವಿಷಯಾಸಕ್ತಿಯ ಬಿಟ್ಟು ನಿರ್ವಿಷಯಿಯಾಗಿ

ನಿಜದಲ್ಲಿ ನಿಂದ ನಿಲವು ನೀನೇ,ಸಿಮ್ಮಲಿಗೆಯ ಚೆನ್ನರಾಮಾ.

 

-ಚಂದಿಮರಸ

--ಚಂದಿಮರಸ ಅವರ ವಚನ …!
Comments (0)
Add Comment