ಚಿತ್ರದುರ್ಗ ಮುರುಘಾ ಶರಣರಿಗೆ ಜಾಮೀನು..!

ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಜಾಮೀನು ನೀಡಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. 2022 ರ ಸೆಪ್ಟಂಬರ್ 1 ರಂದು ಅಪ್ರಾಪ್ತೆ ಬಾಲಕಿ ಮೇಲೆ ದಾಖಲಾಗಿದ್ದ ಒಂದು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ಅರೆಸ್ಟ್‌ ಮಾಡಲಾಗಿತ್ತು. 7 ಷರತ್ತು ವಿಧಿಸಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಒಡನಾಡಿ ಸಂಸ್ಥೆ ಇಬ್ಬರು ಅಪ್ರಾಪ್ತ ಬಾಲಕಿಯರ ಪರ ಪ್ರಕರಣ ದಾಖಲಿಸಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮೈಸೂರಿನಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಪ್ರತ್ಯೇಕ ಎರಡು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.

Comments (0)
Add Comment